ಬೆಂಗಳೂರು: ಪ್ರಜಾ ಧ್ವನಿ ಯಾತ್ರೆಯಲ್ಲಿ ಪಾಲ್ಗೊಂಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಸುಪುತ್ರಿ ಐಶ್ವರ್ಯಗೆ ಸಿಬಿಐ ಅಧಿಕಾರಿಗಳು ನೋಟಿಸ್ ನೀಡಿದ್ದು, ಐಶ್ವರ್ಯಾ ಪಾವತಿಸಿದ್ದ ಶುಲ್ಕದ ಬಗ್ಗೆ ಮಾಹಿತಿ ಕೇಳಿ ಸಿಬಿಐ ನೋಟೀಸ್ ನೀಡಿದೆ.

ನನ್ನ ಮಗಳು ಐಶ್ವರ್ಯಾಗೆ ಸಿಬಿಐನವರು ನೋಟಿಸ್ ನೀಡಿದ್ದು, ಕಾಲೇಜು ಶುಲ್ಕ ಕಟ್ಟಿದ್ದೆಲ್ಲವನ್ನೂ ಕೇಳುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆ.27 ರ ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ಶಿವಕುಮಾರ್ ಅವರಿಗೆ ಸಮನ್ಸ್ ನೀಡಿದ್ದಾರೆ. ದೆಹಲಿಯ ಇಡಿ ಕಚೇರಿಯಲ್ಲಿ ಮತ್ತೊಮ್ಮೆ ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ ಎಂದು ಶಿವಕುಮಾರ್ ಅವರೇ ಹೇಳಿದ್ದಾರೆ.