ಗದಗ: ಶ್ರೀ ತೋಂಟದಾರ್ಯ ಮಠದ ಜಾತ್ರಾ ಮಹೋತ್ಸವದ ಅಂಗವಾಗಿ ಹಾಕಲಾದ ಅಂಗಡಿಗಳ ತೆರವುಗೊಳಿಸುವ ವಿಚಾರವಾಗಿ ಮೇ 26, 2025 ರಂದು ಕೆಲವು ಸಂಘಟನೆಗಳು ಕರೆ ನೀಡಿರುವ ‘ಗದಗ ಬಂದ್’‌ಗೆ ಗದಗ ಜಿಲ್ಲಾ ಪೊಲೀಸರು ನಿಷೇಧ ಹೇರಿದ್ದಾರೆ.

ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಗದಗ ತಾಲೂಕು ದಂಡಾಧಿಕಾರಿಗಳು ಪ್ರತಿಬಂಧಕಾಜ್ಞೆ ಹೊರಡಿಸಿ ಆದೇಶಿಸಿರುವುದಾಗಿ ಜಿಲ್ಲಾ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮೇ 26ರಂದು ಬಂದ್‌ಗೆ ಕರೆ ನೀಡುವುದು, ಬಂದ್‌ ಬೆಂಬಲಿಸುವುದು ಮತ್ತು ಬಂದ್‌ಗೆ ಬೆಂಬಲಿಸಿ ಪ್ರತಿಭಟನೆಯಲ್ಲಿ ಭಾಗವಹಿಸುವುದು ನಿಷೇಧಾಜ್ಞೆ ಉಲ್ಲಂಘನೆಯಾಗಿದ್ದು, ಅಪರಾಧವಾಗಿರುತ್ತದೆ. ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಅಧೀಕ್ಷಕರು ಎಚ್ಚರಿಕೆ ನೀಡಿದ್ದಾರೆ.

ಸಾರ್ವಜನಿಕರು ಬಂದ್ ಕರೆಯ ವದಂತಿಗಳಿಗೆ ಕಿವಿಗೊಡಬಾರದು ಮತ್ತು ಅಂತಹ ಊಹಾಪೋಹಗಳಿಗೆ ಒಳಗಾಗಬಾರದು ಎಂದು ಪೊಲೀಸರು ಮನವಿ ಮಾಡಿದ್ದಾರೆ. ಅಲ್ಲದೆ, ದಿನನಿತ್ಯದಂತೆ ತಮ್ಮ ವ್ಯಾಪಾರ ವಹಿವಾಟುಗಳನ್ನು ನಡೆಸಿಕೊಂಡು ಹೋಗುವಂತೆ ವಿನಂತಿಸಲಾಗಿದೆ.