ಅಥಣಿ: ಗಡಿನಾಡು ಕ್ಷೇತ್ರ ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಅಖಾಡ ರಂಗೇರಿದೆ. ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಪ್ರಾಬಲ್ಯದ ಕ್ಷೇತ್ರದಲ್ಲಿ ಪೊಲೀಸ್ ಅಧಿಕಾರಿ ಕಣಕ್ಕಿಳಿಯಲಿದ್ದಾರೆ.

ವಿಜಯಪುರ ಪೊಲೀಸ್ ಠಾಣೆಯಲ್ಲಿ ಸಿಪಿಐ ಆಗಿ ಕರ್ತವ್ಯ ನಿರ್ವಹಿಸಿದ ಬಸವರಾಜ ಬೀಸನಕೊಪ್ಪ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿ ರಾಜಕೀಯ ಅಖಾಡಕ್ಕೆ ಧುಮಕ್ಕಿದ್ದಾರೆ. ಅಥಣಿ ಮತಕ್ಷೇತ್ರದಿಂದ ಸ್ಪರ್ಧಿಸುವ ಕುರಿತು ನಿರ್ಧರಿಸಿರುವ ಬಸವರಾಜ್ ಸಿಪಿಐ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಲಕ್ಷಣ ಸವದಿ, ಶಾಸಕ ಮಹೇಶ್ ಕುಮಟಳ್ಳಿ ಅವರಂತಹ ಘಟಾನುಘಟಿ ರಾಜಕಾರಣಿಗಳನ್ನು ಹೊಂದಿರುವ ಅಥಣಿ ಕ್ಷೇತ್ರಕ್ಕೆ ಮಾಜಿ ಪೊಲೀಸ್ ಅಧಿಕಾರಿ ಬಸವರಾಜ ಅಖಾಡಕ್ಕಿಳಿದಿದ್ದಾರೆ.

ಮೂಲತಃ ರಾಯಬಾಗ ತಾಲೂಕಿನ ಸವಸುದ್ದಿ ಗ್ರಾಮದ ಬಸವರಾಜ ಬೀಸನಕೊಪ್ಪ ಪ್ರಬಲ ಪಂಚಮಸಾಲಿ ಸಮುದಾಯದವರು. ಅಥಣಿ ಮತಕ್ಷೇತ್ರದಲ್ಲಿ ಪಂಚಮಸಾಲಿ ಮತಗಳು ಹೆಚ್ಚಿನ ಪ್ರಮಾಣದಲ್ಲಿವೆ. ಅಥಣಿ ಕ್ಷೇತ್ರದಲ್ಲಿ ಚುನಾವಣಾ ಕಾವು ರಂಗೇರಿದೆ.