ಬೆಳಗಾವಿ: ಮಗಳ ಜನ್ಮ ದಿನದ ಸಂಭ್ರಾಮಚರಣೆಗೆ ಓರ್ವ ವ್ಯಕ್ತಿ ‌ಬೆಳಗಾವಿ ಸುವರ್ಣ ಸೌಧ ಬಾಡಿಗೆಗೆ ಕೇಳಿದ್ದಾನೆ. ಸಭಾಪತಿ ಹಾಗೂ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

ಗೋಕಾಕ್​ ತಾಲೂಕಿನ ಘಟಪ್ರಭಾ ನಿವಾಸಿ ವಕೀಲ ಮಲ್ಲಿಕಾರ್ಜುನ ಚೌಕಾಶಿ ಎಂಬುವರೇ ಪತ್ರ ಬರೆದವರು.

ನನ್ನ ಏಕೈಕ ಪುತ್ರಿಯಾದ ಮಣಿಶ್ರೀಗೆ ಜನವರಿ 30ಕ್ಕೆ 5 ವರ್ಷ ಮುಗಿದು 6ನೇ ವರ್ಷ ತುಂಬಲಿದ್ದು, ಅವಳು 1ನೇ ತರಗತಿಯ ಪ್ರವೇಶ ಪಡೆಯಬೇಕಿದೆ. ಇದು ಅವಳ ಜೀವನದ ಅಮೂಲ್ಯ ಕ್ಷಣ.

ಹೀಗಾಗಿ ಅವಳ ಹುಟ್ಟುಹಬ್ಬವನ್ನು ಆಚರಿಸುವುದರೊಂದಿಗೆ ನಮ್ಮ ಭಾಗದಲ್ಲಿ ಚಿಕ್ಕ ಹೆಣ್ಣುಮಕ್ಕಳಿಗೆ ಹುಟ್ಟದಟ್ಟಿ ಮಾಡುವ ಪದ್ಧತಿಯಿದ್ದು, ಇದು ಕೂಡ ಜೀವನದಲ್ಲಿ ಒಮ್ಮೆ ಬರುವಂತಹದ್ದು. ಆದ್ದರಿಂದ ವರ್ಷದಲ್ಲಿ 15 ದಿನ ಕಲರವದಿಂದ ಕೂಡಿ ಉಳಿದ ದಿನ ಭೂತ ಬಂಗ್ಲೆಯಂತಿರುವ ಕರ್ನಾಟಕ ಸುವರ್ಣ ವಿಧಾನಸೌಧ ಸಭಾಂಗಣವನ್ನು ಬಾಡಿಗೆ ನೀಡಬೇಕು ಎಂದು ವಿನಂತಿಸಿದ್ದಾರೆ.